ಅಕ್ರಮ ಮದ್ಯ ಮಾರಾಟರ ವಿರುದ್ಧ ಸಿಡಿದೆದ್ದ ಮಹಿಳೆಯರು ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ. ಅಕ್ರಮ ಮದ್ಯ ಮಾರಾಟ ಆಗುತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಕನಕದಾಸ ವೃತ್ತದ ಅಂಗಡಿಗಳಲ್ಲಿ ಅಕ್ರಮ ಮದ್ಯ, ಮಾವಾ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ದೇವರ ಹಿಪ್ಪರಗಿ ತಹಶೀಲ್ದಾರ್ ಮೂಲಕ ಸಿಎಂ ಮನವಿ ಸಲ್ಲಿಸಿದರು





