ಸುರಪುರ ನಗರದ ರಸ್ತೆ ಬದಿಯಲ್ಲಿ ತರಕಾರಿ ವ್ಯಾಪಾರಸ್ಥರು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರನ್ನು ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿದರು. ರಸ್ತೆ ಪಕ್ಕದಲ್ಲಿ ವ್ಯಾಪಾರ ಮಾಡಲು ನಗರಸಭೆ ಅಧಿಕಾರಿಗಳು
ಬಿಡುತ್ತಿಲ್ಲ. ಆದ್ದರಿಂದ ತಾವುಗಳು ನಮಗೆ ರಸ್ತೆ ಪಕ್ಕದಲ್ಲಿ ತರಕಾರಿ ಮಾಡಲು ಅವಕಾಶ ಕಲ್ಪಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಶಾಸಕರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಅನೇಕ ಜನ ಮಹಿಳಾ ತರಕಾರಿ
ವ್ಯಾಪಾರಸ್ಥರಿದ್ದರು





