ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಬಿಜೆಪಿಯಿಂದ ಹಮ್ಮಿಕೊಂಡಿರುವ ಬೆಂಗಳೂರಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ರೇಣುಕಾಚಾರ್ಯ ವಾದ್ಯಗಳ ತಾಳಕ್ಕೆ ತಕ್ಕಂತೆ ಕುಣಿಯುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಿದರು. ಮಾಜಿ ಸಚಿವ ರೇಣುಕಾಚಾರ್ಯರೊಂದಿಗೆ ಕಾರ್ಯಕರ್ತರು ಸಹ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದರು. ಈ ಮಳೆ ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಇತರರಿದ್ದರು