ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್’ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೆ ತರುವ ಭರವಸೆಯನ್ನು ರಾಜ್ಯ ಸರ್ಕಾರವು ನೀಡಿದ್ದು, ನೀಡಿರುವ ಭರವಸೆಯಂತೆ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯವನ್ನು ಜಾರಿಗೊಳಿಸುವಂತೆ ಹಾಗೂ ವಿವಿಧ ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಇಂದು ಕಲಬುರಗಿ ನಗರದ ಜಿಲ್ಲಾಧಿಕಾರಗಳ ಕಛೇರಿ ಎದುರಿಗೆ ಕರ್ನಾಟಕ ರಾಜ್ಯ ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುಧ್ದ ಘೋಷಣೆ ಕೂಗಿ, ಆಕ್ರೋಷ ಹೊರಹಾಕಿದರು. ನಂತರ ಪಿಂಚಣಿ ವಂಚಿತರ ಪರವಾಗಿ ಮಾತನಾಡಿದ ಶಶೀಲ್ ನಮೋಶಿ ಅವರು ಈಗಾಗಲೇ ಆಡಳಿತದಲ್ಲಿರುವ ತಮ್ಮ ಕಾಂಗ್ರೆಸ್ ಪಕ್ಷವು ಚುಣಾವಣಾ ಪೂರ್ವ ಪ್ರಣಾಳಿಕೆಯಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್.ಪಿ.ಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೆ ತರುವ ಭರವಸೆಯನ್ನು ನೀಡಿರುತ್ತೀರಿ, ನೀಡಿರುವ ಭರವಸೆಯಂತೆ ಶೀಘ್ರದಲ್ಲಿಯೇ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯವನ್ನು ಜಾರಿಗೋಳಿಸಬೇಕು. ಅದರಂತೆಯೇ ಶಾಲಾ, ಕಾಲೇಜುಗಳ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.





