ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿನ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ವಿದ್ಯಾಲಯದಲ್ಲಿ ಕಲಾವಾಣಿ ವಿದ್ಯಾರ್ಥಿ ಸಂಘದ ವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಲಬುರಗಿ ನಗರದಲ್ಲಿನ ಗೋದುತಾಯಿ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲಾವಾಣಿ ವಿದ್ಯಾರ್ಥಿ ಸಂಘದ ವಂದನಾ ಕಾರ್ಯಕ್ರಮಕ್ಕೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಂಚಾರಿ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ ಅವರ ನೇತೃತ್ವದಲ್ಲಿ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿ ಮಾತನಾಡಿದ ಅವರು 1934 ರಲ್ಲಿ ದೊಡ್ಡಪ್ಪ ಅಪ್ಪ ಹಾಗೂ ಗೋದುತಾಯಿ ಅವ್ವಾಜಿ ಅವರು ಮಹಿಳೆಯರಿಗೆ ಓದಿಸುವ ಸಲುವಾಗಿ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಪ್ರಾರಂಭಿಸಿದ ಸಂಸ್ಥೆ ಗೋದುತಾಯಿ ಕಾಲೇಜು ಆಗಿದ್ದು ಅದು ಇಲ್ಲಿಯವರೆಗೂ ನಡೆಸಿಕೊಂಡು ನಮ್ಮ ಸಂಸ್ಥೆ ನಡೆಸಿಕೊಂಡು ಬರುತ್ತಿರುವುದು ಸಂತೋಷದ ವಿಷಯವಾಗಿದೆ. ಆದ್ದರಿಂದ ಈಗಿನ ಕಾಲದಲ್ಲಿ ಶಿಕ್ಷಣ ಸಂಪಾದಿಸಿದಲ್ಲಿ ಮಾತ್ರವೇ ಉನ್ನತ ಮಟ್ಟದಲ್ಲಿ ಹೋಗಲು ಸಾಧ್ಯವಿರುವುದರಿಂದ ತಾವೆಲ್ಲರೂ ಶಿಕ್ಷಣವನ್ನು ಸಂಪಾದಿಸಿ ಎಂದು ಕರೆ ನೀಡಿದರು





