ಯಾದಗಿರಿ ನಗರ ಪಿಎಸ್’ಐ ಆದ ಪರಶುರಾಮ್ ಛಲವಾದಿ ಅವರ ಶಂಕಾಸ್ಪದ ಸಾವಿಗೆ ಕಾರಣಿಕರ್ತರಾದ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರನ್ನು ಕೂಡಲೇ ಬಂಧಿಸಿ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಜಂಟಿಯಾಗಿ ನಡೆಸಿದ ಪ್ರತಿಭಟನೆಯು ನಗರದ ಜಗತ್ ವೃತ್ತದಿಂದ ಕಾಲ್ನಡಿಗೆಯ ಮುಖಾಂತರವಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಅವರು ಯಾದಗಿರಿ ನಗರ ಠಾಣೆಯ ದಕ್ಷ ಹಾಗೂ ಪ್ರಾಮಾಣಿಕ ಪಿಎಸ್’ಐ ಪರಶುರಾಮ ಅವರು ಸರಕಾರಿ ವಸತಿ ಗೃಹದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಈ ಸಾವಿಗೆ ಅವರ ಕುಟುಂಬದವರ ದೂರಿನ ಪ್ರಕಾರ ಯಾದಗಿರಿ ನಗರ ಠಾಣೆಯಲ್ಲಿ ಪಿ.ಎಸ್.ಐ ಆಗಿ ಮುಂದುವರೆಯಲು ಯಾದಗಿರಿ ಶಾಸಕರಾದ ಚನ್ನಾರೆಡ್ಡಿ ಪಾಟೀಲ ಹಾಗೂ ಅವರ ಮಗನಾಗ ಪಂಪನಗೌಡ ಅವರು 30 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿರುತ್ತಾರೆ ಆದ್ದರಿಂದ ಅವರು ಮನನೊಂದು ಸಾವನ್ನಪ್ಪಿರುತ್ತಾರೆ. ಆದ್ದರಿಂದ ಈ ಘಟನೆ ನಡೆದು ಸುಮಾರು ದಿನಗಳೇ ಕಳೆದರೂ, ಅವರಿಗೆ ನ್ಯಾಯ ಸಿಕ್ಕಿಲ್ಲ ಹಾಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಮೃತ ಪಿಎಸ್’ಐ ಕುಟುಂಬಕ್ಕೆ 5 ಕೋಟಿ ರೂಪಾಯಿಗಳ ಪರಿಹಾರ ನೀಡಬೇಕು ಹಾಗೆಯೇ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ





