ತ್ವರಿತವಾಗಿ ಗುರುಭವನ ನಿರ್ಮಾಣಕ್ಕೆ ಕ್ರಮವಹಿಸಲಾಗಿದ್ದು, ಮುಂದಿನ ವರ್ಷ ಗುರುಭವನದಲ್ಲಿ ಶಿಕ್ಷಕರ ದಿನ ಆಚರಿಸಲಾಗುವುದು ಎಂದು ಶಾಸಕ ಕೆ. ವೈ. ನಂಜೇಗೌಡ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಭಾಪುಲೆ ದಂಪತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಮಾತನಾಡಿದರು. ಶಿಕ್ಷಕರು ಪಠ್ಯದ ಜೊತೆ ನೈತಿಕ ಮತ್ತು ಮಾನವೀಯ ಮೌಲ್ಯವನ್ನು ಬೋಧಿಸುತ್ತಾರೆ ಎಂದು ತಿಳಿಸಿದರು.