ಕೇಂದ್ರದಲ್ಲಿ ಹೆಎಚ್ಡಿಕೆ ಅವರ ಪ್ರಾಬಲ್ಯ ಹೆಚ್ಚುತ್ತಿದೆ. ಬಿಜೆಪಿ ಜೆಡಿಎಸ್ನಲ್ಲಿ ಒಂದಾಗಿತ್ತು? ಎಂಬ ಪ್ರಶ್ನೆಗೆ, ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಯಾವುದೇ ಪಕ್ಷದ ಜೊತೆ ಮರ್ಜ್ ಆಗಲ್ಲ. ಹಿಂದೂ ಸಂಸ್ಕೃತಿಯ ನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.