ಕಾರ್ಮಿಕ ಸಚಿವ ಸಂತೋಷ ಲಾಡ್ ಪುತ್ರ ಕರಣ್ ಲಾಡ್ ತಮ್ಮ 17ನೇ ವಯಸ್ಸಿನಲ್ಲೇ ‘ಎ ಗ್ಲಿಚ್ ಇನ್ ದಿ ಸಿಮ್ಯುಲೇಷನ್’ ಎಂಬ ಪುಸ್ತಕವನ್ನು ಬರೆದಿದ್ದಾರೆ. ಪುಸ್ತಕವನ್ನು ‘ಪ್ರತ್ಯನುಕರಣೆಯ ನ್ಯೂನತೆಗಳು’ ಎಂಬ ಹೆಸರಿನಲ್ಲಿ ಅನುವಾದ ಮಾಡಲಾಗಿದ್ದು, ಅನುವಾದಿತ ಪುಸ್ತಕವನ್ನು ಬುಧವಾರ ಧಾರವಾಡದ ಸೃಜನಾ ರಂಗಮಂದಿರದಲ್ಲಿ ಬಿಡುಗಡೆ ಮಾಡಲಾಯಿತು. ಡಾ. ಎಂ. ಎಂ ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಪುಸ್ತಕ ಬಿಡುಗಡೆ ಮಾಡಿದರು.