ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಸುಜಾತ ಟಾಕೀಸ್ ಹತ್ತಿರ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ವಲಯ ಆಯುಕ್ತ ಅರ್ಚನಾ ರವರ ನೇತೃತ್ವದಲ್ಲಿ ನಡೆಯಿತು. ಸ್ಥಳದಲ್ಲಿ ವಲಯ ಆಯುಕ್ತರಾದ ಸಂಗಪ್ಪ, ಮುಖ್ಯ ಅಭಿಯಂತರರಾದ ಶಶಿಕುಮಾರ್, ಕಾರ್ಯಪಾಲಕ ಅಭಿಯಂತರರಾದ ದೇವರಾಜ್, ಕೀರ್ತಿ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.





