Google search engine
ಮನೆUncategorizedಅತಿವೃಷ್ಠಿಯಿಂದ ಹಾನಿಯಾದ ಪ್ರದೇಶಗಳಿಗೆ ಮುನೀಶ್ ಮೌದ್ಗಿಲ್ ಭೇಟಿ ಪರಿಶೀಲನೆ

ಅತಿವೃಷ್ಠಿಯಿಂದ ಹಾನಿಯಾದ ಪ್ರದೇಶಗಳಿಗೆ ಮುನೀಶ್ ಮೌದ್ಗಿಲ್ ಭೇಟಿ ಪರಿಶೀಲನೆ

ಅತಿವೃಷ್ಠಿಯಿಂದ ಹಾನಿಯಾದ ಪ್ರದೇಶಗಳಿಗೆ ಮುನೀಶ್ ಮೌದ್ಗಿಲ್ ಭೇಟಿ ಪರಿಶೀಲನೆ

ಪ್ರಕೃತಿ ವಿಕೋಪ ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರು ರವಿವಾರ ಬೀದರ ಜಿಲ್ಲೆಯ ಕಮಠಾಣ, ಬಗದಲ್, ಗೋಧಿ ಹಿಪ್ಪರಗಾ, ಮುಡಬಿ ಸೇರಿದಂತೆ ಇತರೆ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇಂದು ನಡೆಯುವ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಅತಿವೃಷ್ಟಿಯಿಂದ ಆದಂತಹ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ರಮ್ಯಾ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ದೇವಿಕಾ , ಸಹಾಯಕ ಆಯುಕ್ತರು, ತಹಸಿಲ್ದಾರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!