ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ಯಾದಗಿರಿ ನಗರದ ಅಂಭಾ ಭವಾನಿ ಮಂದಿರದ ಮುಂಭಾಗದಲ್ಲಿ ಹಿಂದೂ ಮಹಾಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದ್ದು. ನಿತ್ಯವೂ ಶ್ರೀ ಗಣೇಶನಿಗೆ ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆ ಹಾಗೂ ಅನ್ನದಾಸೋಹ ಸೇವೆ ಕಾರ್ಯಕ್ರಮ ಮಾಡಿಕೊಂಡು ಬರಲಾಗುತಿದ್ದು.ಇಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಶ್ರೀ ಗಣೇಶನಿಗೆ ಪೂಜೆ ಸಲ್ಲಿಸಿ ಗಣೇಶನ ಕೃಪೆಗೆ ಪಾತ್ರರಾದರು. ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಷ್ ಕಟಕಟಿ ಹಾಗೂ ಅನೇಕ ಭಕ್ತರು ಇದ್ದರು