Home Uncategorized ಸಿಎಂ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಜಾತಿ ಗಣತಿ ಇದೀಗ ಸರ್ಕಾರಕ್ಕೆ ತಿರುಗುಬಾಣವಾಗುವ ಲಕ್ಷಣಗಳು ಗೋಚರಿಸುತ್ತಿದೆ

ಸಿಎಂ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಜಾತಿ ಗಣತಿ ಇದೀಗ ಸರ್ಕಾರಕ್ಕೆ ತಿರುಗುಬಾಣವಾಗುವ ಲಕ್ಷಣಗಳು ಗೋಚರಿಸುತ್ತಿದೆ

0
ಸಿಎಂ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಜಾತಿ ಗಣತಿ ಇದೀಗ ಸರ್ಕಾರಕ್ಕೆ ತಿರುಗುಬಾಣವಾಗುವ ಲಕ್ಷಣಗಳು ಗೋಚರಿಸುತ್ತಿದೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಜಾತಿ ಗಣತಿ ಇದೀಗ ಸರ್ಕಾರಕ್ಕೆ ತಿರುಗುಬಾಣವಾಗುವ ಲಕ್ಷಣಗಳು ಗೋಚರಿಸುತ್ತಿದೆ. ಜಾತಿ ಗಣತಿ ವಿಚಾರವಾಗಿ ಸಾರ್ವಜನಿಕ ವಲಯದ ಒಂದು ವಿಭಾಗದಲ್ಲಿ ಕೇಳಿ ಬರುತ್ತಿರುವ ಅಪಸ್ವರ ಸರ್ಕಾರಕ್ಕೆ ತಲೆನೋವು ಉಂಟು ಮಾಡಿದೆ. ಈ ನಿಟ್ಟಿನಲ್ಲಿ ಜಾತಿ ವಿಚಾರವಾಗಿ ಎಚ್ಚರಿಕೆಯ ಹೆಜ್ಜೆಯನ್ನು ಇಡಲು ತೀರ್ಮಾನ ಮಾಡಲಾಗಿದೆಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದಲ್ಲಿ ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಹೈವೋಲ್ಟೇಟ್ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಹಿರಿಯ ಸಚಿವರು ಉಪಸ್ಥಿತರಿರಲಿದ್ದಾರೆ. ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ013 ರಲ್ಲೂ ಸರ್ಕಾರಕ್ಕೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ದೊಡ್ಡ ಮಟ್ಟದಲ್ಲಿ ಹಿನ್ನಡೆಯನ್ನು ಉಂಟು ಮಾಡಿತ್ತು. ಕಾಂಗ್ರೆಸ್ ಧರ್ಮಗಳನ್ನು ಒಡೆಯುತ್ತಿದೆ ಎಂಬ ಆರೋಪವನ್ನು ಮಾಡಲಾಗಿತ್ತು. ಇದೀಗ ಮತ್ತೆ ಅಂತದ್ದೇ ‘ನರೇಷನ್’ ಸೃಷ್ಟಿಸುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿದೆ. ಜಾತಿ ಸಂಘಟನೆಗಳು ಕೂಡಾ ಸರ್ಕಾರದ ನಡೆಯ ಬಗ್ಗೆ ಅಪಸ್ವರ ಎತ್ತುತ್ತಿವೆ. ಹೀಗಿರುವಾಗ ಎಚ್ಚರ ತಪ್ಪದೆ ಹೆಜ್ಜೆ ಇಡಲು ತೀರ್ಮಾನ ಮಾಡಲಾಗಿದೆಜಾತಿ ಸಮೀಕ್ಷೆಯ ಬಗ್ಗೆ ಸಚಿವರು ಭಿನ್ನ ಅಭಿಪ್ರಾಯ ಹೊಂದಿದ್ದಾರೆ. ಜಾತಿ ಸಮೀಕ್ಷೆಯಲ್ಲಿ ಹಿಂದೂ ಜಾತಿ ಹೆಸರಿನ ಮುಂದೆ ಇರುವ ಕ್ರಿಶ್ಚಿಯನ್ ಉಲ್ಲೇಖದ ಬಗ್ಗೆ ಕೇಳಿಬರುತ್ತಿರುವ ವಿರೋಧದ ಬಗ್ಗೆ ಸಚಿವ ಸಂಪುಟದಲ್ಲೂ ಚರ್ಚೆ ಆಗಿದೆ. ಇದಕ್ಕೆ ತಡೆ ಹಾಕಲು ಸ್ವತಃ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆದರೆ ಸಮೀಕ್ಷೆ ಸಾಕಷ್ಟು ಗೊಂದಲ ಸೃಷ್ಟಿಸುತ್ತಿದ್ದು, ಹೀಗಾಗಿ ಸಮೀಕ್ಷೆ ಮುಂದೂಡಿ ಎಂಬ ಬೇಡಿಕೆಯನ್ನು ಕೆಲವು ಸಚಿವರು ಇಟ್ಟಿದ್ದಾರೆಸಚಿವರಾದ ಈಶ್ವರ ಖಂಡ್ರೆ, ಡಿ.ಕೆ.ಶಿವಕುಮಾರ್, ಎಸ್.ಎಸ್ ಮಲ್ಲಿಕಾರ್ಜುನ್ ಜಾತಿ ಸಮೀಕ್ಷೆ ಬೇಡ ಎಂಬ ಅಭಿಪ್ರಾಯವನ್ನು ಸಂಪುಟ ಸಭೆಯಲ್ಲೇ ವ್ಯಕ್ತಪಡಿಸಿದ್ದಾರೆ. ಜಾತಿ ಸಮೀಕ್ಷೆ ನಡೆಸಬೇಕೋ ಬೇಡವೋ, ಕ್ರಿಶ್ಚಿಯನ್ ಧರ್ಮದಲ್ಲಿ ಹಿಂದೂ ಜಾತಿಗಳನ್ನು ಸೃಷ್ಟಿಸಿ ಗೊಂದಲ ಉಂಟಾಗಿದ್ದು, ಜಾತಿ ಪಟ್ಟಿಯಲ್ಲಿ ಸುಮಾರು 331 ಜಾತಿಗಳ ಸೇರ್ಪಡೆಯಾಗಿರುವ ಬಗ್ಗೆ ಹಲವು ಸಚಿವರುಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆಜಾತಿ ಪಟ್ಟಿಯಲ್ಲಿ 331 ಜಾತಿಗಳ ಸೇರ್ಪಡೆಯಿಂದ ಜಾತಿ ಜಾತಿ ಮಧ್ಯೆ ಬಿರುಕು ಉಂಟಾಗಲು ಕಾರಣವಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಈ ಗೊಂದಲದ ಮಧ್ಯೆ ಜಾತಿ ಗಣತಿ ಮಾಡಿದರೆ ಸರ್ಕಾರಕ್ಕೆ ಹಿನ್ನಡೆಯಾಗಲಿದೆ ಎಂಬುವುದು ಅವರ ಆತಂಕಕ್ಕೆ ಕಾರಣವಾಗಿತ್ತುಜಾತಿ ಗಣತಿ ವಿಚಾರವಾಗಿ ಕೇಳಿಬರುತ್ತಿರುವ ವಿರೋಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬೇಸರಗೊಂಡಿದ್ದಾರೆ. ಉತ್ತಮ ಉದ್ದೇಶದಿಂದ ಜಾತಿ ಗಣತಿ ಮಾಡುತ್ತಿದ್ದೇವೆ. ಆದರೆ ನನ್ನನ್ನೇ ಜಾತಿವಾದಿ ಅಂತ ಪಟ್ಟ ಕಟ್ಟುತ್ತಿದ್ದಾರೆ. ನಾನು ಅಹಿಂದ ನಾಯಕ ಎಂಬ ಪಟ್ಟ ಕಟ್ಟುತ್ತಿದ್ದಾರೆ ಎಂದು ಸಚಿವರ ಮುಂದೆ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆಪ್ರತಿಯೊಂದು ಜಾತಿಯಲ್ಲೂ ಬಡವರಿದ್ದಾರೆ. ಅದನ್ನು ಸರಿಪಡಿಸಲು ಜಾತಿ ಸಮೀಕ್ಷೆಯನ್ನು ಮಾಡಲಾಗುತ್ತಿದೆ. ಎಲ್ಲಾ ಜಾತಿಗಳ ಬಡವರ ಪರ ಸಮೀಕ್ಷೆ ಆಗಲಿ ಎಂಬುದು ನಮ್ಮ ಉದ್ದೇಶ. ಆದರೆ ತಮ್ಮ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ. ಹಿಂದುಳಿದ, ದಲಿತ, ಅಲ್ಪಸಂಖ್ಯಾತರ ಪರ ಎಂದು ಹೇಳುತ್ತಾರೆ. ಈ ಮೂಲಕ ಮೇಲ್ವರ್ಗದ ವಿರೋಧಿ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಸಿಎಂ ನೋವು ತೋಡಿಕೊಂಡಿದ್ದಾರೆಜಾತಿ ಗಣತಿ ಗೊಂದಲದ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಮಾತನಾಡಿ, “ ಜಾತಿ ಗಣತಿ ವಿಚಾರದ ಬಗ್ಗೆ ನಾವು ಇನ್ನು ಏನು ತೀರ್ಮಾನ ತೆಗೆದುಕೊಂಡಿಲ್ಲ. ಈ ಬಗ್ಗೆ ಏನು ತೀರ್ಮಾನ ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸಮೀಕ್ಷೆ ಮುಂದೂಡಿಕೆ ಇಲ್ಲ, ಬದಲಾಗಿ ಸೂಕ್ತ ಸಮಯದಲ್ಲೇ ಮಾಡುತ್ತೇವೆ. ಯಾವುದಾದರು ತೀರ್ಮಾನಕ್ಕೆ ಬಂದ್ರೆ ಅದು ಬೇರೆ ಪರಿಣಾಮಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ” ಎಂದಿದ್ದಾರೆಜಾತಿ ಗಣತಿಯಲ್ಲಿ ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂದು ಉಲ್ಲೇಖ ಮಾಡಿರುವ ನಿಟ್ಟಿನಲ್ಲಿ ಅದನ್ನು ಪರಿಷ್ಕರಣೆ ಮಾಡಬೇಕು ಎಂಬ ಒತ್ತಾಯ ಇದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಏನು ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಮತ್ತೊಂದು ಕಡೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಜಾತಿ ಗಣತಿ ಪರವಾಗಿ ಇದೆ. ಹಾಗಾಗಿ ಸಮೀಕ್ಷೆ ಮುಂದೂಡಿಕೆ ಮಾಡುವ ಸಾಧ್ಯತೆ ಎಷ್ಟರ ಮಟ್ಟಿಗೆ ಇದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ

LEAVE A REPLY

Please enter your comment!
Please enter your name here

error: Content is protected !!