ದಾಸರಹಳ್ಳಿ: ಆರ್ ಎಸ್ ಎಸ್ ಚಟುವಟಿಕೆ ಮೇಲೆ ಕಾಂಗ್ರೆಸ್ ಕಣ್ಣು ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳ ಮೇಲೆ ಕಾಂಗ್ರೆಸ್ ಸರ್ಕಾರ ಕಠಿಣ ನಿಲುವು ತಾಳಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ, ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಸಭೆ ನಡೆಸಲು ಪೂರ್ವಾನುಮತಿ ಕಡ್ಡಾಯಗೊಳಿಸಿ, ಹೊಸ ನಿರ್ಣಯ ಕೈಗೊಂಡಿದೆ. ಈ ನಿರ್ಬಂಧವು ತಮಿಳುನಾಡಿನಲ್ಲಿ ಜಾರಿಯಲ್ಲಿರುವ ನಿಯಮಗಳ ಮಾದರಿಯಲ್ಲಿದೆ. ಈ ಕ್ರಮವು ಸಂಘದ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶ ಹೊಂದಿದೆ