ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಆಗಿರುವ ನಾರಾಯಣ ಹೆಲ್ತ್ -ಸಿಟಿಯು ಸಾಮಾನ್ಯವಾಗಿ ಹದಿಹರೆಯದ ಹುಡುಗಿಯರಲ್ಲಿ ಹೆಚ್ಚಾಗಿ ಕಂಡು ಬರುವಂತಹ ಮತ್ತು ಕಡಿಮೆ ಪರಿಗಣಿಸಲ್ಪಟ್ಟಿರುವ ಹಾಗೂ ಪೂರ್ತಿ ಗುಣಪಡಿಸಬಹುದಾದ ಕ್ಯಾನ್ಸರ್ ಗುಂಪುಗಳಲ್ಲಿ ಒಂದಾಗಿರುವ ಅಂಡಾಶಯದ ಜೆರ್ಮ್ ಸೆಲ್ ಗಡ್ಡೆಗಳ ಸಮಸ್ಯೆಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿರುವ ಸಕಾರಾತ್ಮಕ ಕತೆಗಳನ್ನು ಹಂಚಿಕೊಂಡು ಈ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದೆ ಅಂತ ಸುದ್ದಿಗೋಷ್ಠೀ ನಡೆಸಲಾಗಿದೆ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಾರಾಯಣ ಹೆಲ್ತ್ ಸಿಟಿಯ ಗೈನಕಾಲಜಿಕ್ ಅಂಕೊಲಾಜಿ ವಿಭಾಗದ ಸೀನಿಯರ್ ಕನ್ಸಲೆಂಟ್ ಮತ್ತು ಕ್ಲಿನಿಕಲ್ ಲೀಡ್ ಡಾ. ರೋಹಿತ್ ರಘುನಾಥ್ ರಾನಡೆ ಅವರು, ಭರವಸೆ ಮತ್ತು ಗುಣಪಡಿಸುವಿಕೆ ಅಂಡಾಶಯದ ಜೆರ್ಮ್ ಸೆಲ್ ಗೆಡ್ಡೆಗಳ ಕುರಿತು ತಿಳುವಳಿಕೆ’ ಎಂಬ ಅಭಿಯಾನದ ಬಗ್ಗೆ ವಿವರವಾಗಿ ತಿಳಿಸಿದರು. ಕಲಬುರಗಿ, ಬೀದರ್, ವಿಜಯಪುರ (ಬಿಜಾಪುರ), ಬಾಗಲಕೋಟೆ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ರೋಗಿಗಳು ಯಶಸ್ವಿಯಾಗಿ ಚಿಕಿತ್ಸೆ ಪಡೆದು ಉತ್ತಮ ರೀತಿಯಲ್ಲಿ ಜೀವನ ನಡೆಸುತ್ತಿರುವ ಕಥೆಗಳನ್ನು ಹಂಚಿಕೊಂಡರು
ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಕ್ಯಾನ್ಸರ್ ಜೆರ್ಮ್ ಸೆಲ್ ಗಡ್ಡೆಗಳ ಸಮಸ್ಯೆ ಯಶಸ್ವಿ ಚಿಕಿತ್ಸೆ ಕುರಿತು ಜಾಗೃತಿ
ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಕ್ಯಾನ್ಸರ್ ಜೆರ್ಮ್ ಸೆಲ್ ಗಡ್ಡೆಗಳ ಸಮಸ್ಯೆ ಯಶಸ್ವಿ ಚಿಕಿತ್ಸೆ ಕುರಿತು ಜಾಗೃತಿ





