ಡಲ್ ಆಗಿದ್ದೀರಾ ಎಂಬ ಪ್ರಶ್ನೆಗೆ ಸಿಎಂ ಸಿದ್ದು ಹೇಳಿದ್ದೇನು? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಶನಿವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಸದಾಶಿವನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಇದು ಕೇವಲ ಸೌಹಾರ್ದ ಭೇಟಿ ಎಂದು ಹೇಳಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ ನಾಯಕತ್ವ ಬದಲಾವಣೆ ವಿಚಾರವಾಗಿ, ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ತಾನು, ಶಾಸಕರು, ಸಚಿವರು ಮತ್ತು ಡಿಸಿಎಂ ಕೂಡ ಬದ್ಧರಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ ತಾನು ಎಂದಿಗೂ ಡಲ್ ಆಗುವುದಿಲ್ಲ ಎಂದೂ ಅವರು ಹೇಳಿದ್ದಾರೆ