ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ! ಬೆಂಗಳೂರು ಪೊಲೀಸ್ ಠಾಣೆ ಬಳಿ ಬೆಂಬಲಿಗರು ಹೈಡ್ರಾಮ ಬಾಂಗ್ಲಾದೇಶದ ಅಕ್ರಮ ವಲಸಿಗರ ವಿರುದ್ಧ ಪುನೀತ್ ಕೆರೆಹಳ್ಳಿ ತಂಡ ದಾಂಧಲೆ ನಡೆಸಿದೆ ಈ ಸಂಬಂಧ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಬೆಂಬಲಿಗ ನಾಗೇಂದ್ರಪ್ಪನನ್ನು ಸಹ ಬಂಧಿಸಲಾಗಿದೆಈ ಘಟನೆ ಪೊಲೀಸ್ ಠಾಣೆ ಮುಂದೆ ಹೈಡ್ರಾಮ ಸೃಷ್ಟಿಸಿ ತು ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ ಹಾಗೂ ಸುತ್ತಲ ಪ್ರದೇಶಗಳಲ್ಲಿಅಕ್ರಮ ವಲಸಿಗರು ವಾಸಿಸುತ್ತಿದ್ದಾರೆಂದು ಆರೋಪಿಸಿ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡವು ಕೆಲ ಶೆಡ್ಗಳಿಗೆ ತೆರಳಿ ವಿಡಿಯೊ ಚಿತ್ರೀಕರಿಸಿದ್ದರು. ಈ ದೃಶ್ಯಾವಳಿಗಳು ಜಾಲತಾಣಗಳಲ್ಲಿವೈರಲ್ ಆಗಿದ್ದವು. ಪುನೀತ್ ಕೆರೆಹಳ್ಳಿ ಅವರು ತಮ್ಮ ಶೆಡ್ಗಳಿಗೆ ಅನಧಿಕೃತವಾಗಿ ಪ್ರವೇಶಿಸಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಿ ಸಿದ್ದೇಶ್ ಎಂಬುವವರು ದೂರು ನೀಡಿದ್ದರುಈ ದೂರಿನ ಅನ್ವಯ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ! ಬೆಂಗಳೂರು ಪೊಲೀಸ್ ಠಾಣೆ ಬಳಿ ಬೆಂಬಲಿಗರು ಹೈಡ್ರಾಮ
RELATED ARTICLES
Recent Comments
ಮೇಲೆ Hello world!





