Google search engine
ಮನೆLocal News22 ರಿಂದ ವಿಶ್ವರಾಧ್ಯರ ಜಾತ್ರೆ

22 ರಿಂದ ವಿಶ್ವರಾಧ್ಯರ ಜಾತ್ರೆ

22 ರಿಂದ ವಿಶ್ವರಾಧ್ಯರ ಜಾತ್ರೆ

ಯಾದಗಿರಿ ತಾಲೂಕಿನ ಅಬ್ಬೆತುಮಕೂರಿನ ಅನುಗ್ರಹ ಕ್ಷೇತ್ರ ಶ್ರೀ ವಿಶ್ವಾರಾಧ್ಯರ ಜಾತ್ರೆಯು ಇದೆ 22 ರಂದು ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಅಬ್ಬೆತುಮಕೂರಿನ ಶ್ರೀ ವಿಶ್ವಾರಾಧ್ಯಸಿದ್ದ ಸಂಸ್ಥಾನದ ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮಿಗಳು ಹೇಳಿದ್ದಾರೆ ಅವರು ಅಬ್ಬೆತುಮಕೂರಿನ ಶ್ರೀ ಮಠದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ,ಜಾತ್ರೆ ಅಂಗವಾಗಿ ಶ್ರೀ ವಿಶ್ವರಾಧ್ಯರ ಪುರಾಣ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.ಇದೆ 21 ರಂದು ಸಾಧುಸಂತರ ಧ್ವನಿ ಕಾರ್ಯಕ್ರಮ ನಡೆಯಲಿದೆ.22 ರಂದು ಶ್ರೀಮಠದ ಆವರಣದಲ್ಲಿ ರಥಾಂಗ ಹೋಮ ,ಹಲವಾರು ಧಾರ್ಮಿಕ ಕಾರ್ಯಕ್ರಮ ನಂತರ ಅದ್ದೂರಿಯಾಗಿ ರಥೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.ಜಾತ್ರೆಯಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಜಗದ್ಗುರು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಾಧೀಶರು,ಸಚಿವರಾದ ಎಚ್.ಕೆ.ಪಾಟೀಲ, ರಾಮಲಿಂಗಾರೆಡ್ಡಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಆಗಮಿಸಲಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!