ನೂತನವಾಗಿ ರಾಷ್ಟ್ರೀಯ ಕೃಷಿ ಮತ್ತು ಸಹಕಾರ ಮಾರುಕಟ್ಟೆ ಸಂಸ್ಥೆಯ ( ನ್ಯಾಫಡ್) ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಸಿದ್ದಪ್ಪ ಹೊಟ್ಟಿ ಅವರಿಗೆ ಅದ್ದೂರಿಯಾಗಿ ಸನ್ಮಾನಿಸಲಾಯಿತು.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವೀರಶೈವ ಸಮಾಜದ ಆಶ್ರಯದಲ್ಲಿ ಯಾದಗಿರಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ಸಿದ್ದಪ್ಪ ಹೊಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಗುರುಮಠಕಲ್ ನ ಖಾಸಾಮಠದ ಶ್ರೀ ಶಾಂತವೀರ ಮುರುಘರಾಜೇಂದ್ರ ಹಾಗೂ ಹಲವು ಗಣ್ಯರು ಸಿದ್ದಪ್ಪ ಹೊಟ್ಟಿ ಅವರಿಗೆ ಸನ್ಮಾನಿಸಿ ಗೌರವಿಸಿದರು. ಈ ವೇಳೆ ನ್ಯಾಫಡ್ ರಾಷ್ಟ್ರೀಯ ಉಪಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ,ನ್ಯಾಫೆಡ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದಕ್ಕೆ ಖುಷಿ ವ್ಯಕ್ತಪಡಿಸಿದರು.





