ಶಿಕ್ಷಣ ಮಂತ್ರಿಗಳು ಹಾಗೂ ಇಲಾಖೆಯ ಗೊಂದಲದಿಂದಾಗಿ ಶಿಕ್ಷಕರು ಮತ್ತು ಅಧಿಕಾರಿಗಳು ಹೈರಾಣಾಗಿದ್ದಾರೆ ಎಂದು ಅನ್ನೇಯ ಶಿಕ್ಷಕರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ವೈ ಎ ನಾರಾಯಣಸ್ವಾಮಿ ಆರೋಪಿಸಿದರು.
ಅವರು ಚಿತ್ರದುರ್ಗದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತಾಡಿದರು. ಇಲಾಖೆಯ ಗೊಂದಲಗಳಿಂದಾಗಿ ಪೋಷಕರು ಕಂಗಾಲಾಗಿದ್ದಾರೆ. ಶಿಕ್ಷಣ ಮಂತ್ರಿಗಳಿಗೆ ಶಿಕ್ಷಣದ ಜ್ಞಾನವಿಲ್ಲ. ಇದರಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ. ಅಧಿಕಾರಿಗಳ ಮೇಲೆ ಹಿಡಿತವಿಲ್ಲದ, ದಿನಕ್ಕೊಂದು ಆದೇಶ ಮಾಡುತ್ತಿದ್ದಾರೆಂದು ಹೇಳಿದರು





