Google search engine
ಮನೆUncategorizedಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟಾಗ ಅವರ ಭವಿಷ್ಯ ಉಜ್ವಲವಾಗುತ್ತದೆ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟಾಗ ಅವರ ಭವಿಷ್ಯ ಉಜ್ವಲವಾಗುತ್ತದೆ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟಾಗ ಅವರ ಭವಿಷ್ಯ ಉಜ್ವಲವಾಗುತ್ತದೆ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಅವರ ಭವಿಷ್ಯ ಉಜ್ವಲವಾಗಲು ಸಾಧ್ಯವಾಗುತ್ತದೆ. ಹೀಗಾಗಿ  ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಬೋಧಿಸಬೇಕು ಎಂದು  ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 2024 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಾಗೂ ನೂತನ ಪೂರ್ವ ಪ್ರಾಥಮಿಕ, ಎಲ್. ಕೆ. ಜಿ- ಯುಕೆಜಿ ತರಗತಿಯನ್ನು  ಉದ್ಘಾಟಿಸಿ ಅವರು ಮಾತನಾಡಿದರು.

ಬೇಸಿಗೆ ರಜೆಗಳು  ಕಳೆದು  ಶಾಲೆಗಳು ಪುನರಾರಂಭ ಆಗಿದ್ದು,  ಶಾಲೆಗೆ  ದಾಖಲಾಗುವ ಮಕ್ಕಳು ಕಲಿಕೆಯಿಂದ ಹೊರಗುಳಿಯದಂತೆ ಎಲ್ಲಾ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮಕ್ಕಳ ಪಾಲಕರಿಗೆ ತಿಳಿ ಹೇಳಬೇಕು. ಮಗುವಿನ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಯ ಹಿತ ದೃಷ್ಟಿಯಿಂದ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ರೂಪಿಸಿಕೊಂಡು ಪರಿಣಾಮಕಾರಿ ಕಲಿಕೆಗೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ನುಡಿದರು.

ಈ ಸಂದರ್ಭದಲ್ಲಿ ಡಿಡಿಪಿಐ ಮಂಜುನಾಥ, ಬಿಆರ್ಸಿ ಮಲ್ಲಿಕಾರ್ಜುನ ಪೂಜಾರಿ, ಹೊನಗೇರಾ ಕ್ಲಸ್ಟರ್ ಸಿಆರ್ಸಿ ಕೃಷ್ಣಾರೆಡ್ಡಿ, ಸಹ ಶಿಕ್ಷಕಿಯರಾದ ಹುಸ್ನಾರ, ಸುರೇಖ ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!