ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಇಂದು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಕಲಬುರಗಿ ವತಿಯಿಂದ ಸುದ್ದಿಗೋಷ್ಟಿ ನಡೆಸಲಾಯಿತು. ಈ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಲಕ್ಷ್ಮಣ ದಸ್ತಿ ಅವರು ದಕ್ಷಿಣ ಕರ್ನಾಟಕದ ಜನರು ಸಂವಿಧಾನ 371 ಜೆ ಕಲಂ ವಿರುಧ್ದ ಜೂನ್ ಒಂದರಂದು ನಡೆಯುತ್ತಿರುವ ಹೋರಾಟಕ್ಕೆ ಕಲಬುರಗಿ ಸಂಸದ ಉಮೇಶ್ ಜಾಧವ್ ಅವರು ವಿರೋಧ ವ್ಯಕ್ತಪಡಿಸಲಿ ಎಂದರು.





