Home Uncategorized ಬೆಳಗಾವಿ ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುವೆ: ಲಕ್ಷ್ಮೀ ಹೆಬ್ಬಾಳ್ಳರ್

ಬೆಳಗಾವಿ ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುವೆ: ಲಕ್ಷ್ಮೀ ಹೆಬ್ಬಾಳ್ಳರ್

0
ಬೆಳಗಾವಿ ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುವೆ: ಲಕ್ಷ್ಮೀ ಹೆಬ್ಬಾಳ್ಳರ್

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಚುನಾವಣಾ ಫಲಿತಾಂಶ ಗಮನಿಸಿದರೆ ಬಿಜೆಪಿ ಹಾಗೂ ಎಂಇಎಸ್ ಒಂದಾದಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಕಳೆದ 25 ವರ್ಷಗಳಿಂದಲೂ ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಂಇಎಸ್ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಆದರೆ, ಈ ಬಾರಿ ಆ ರೀತಿ ಆಗಿಲ್ಲ, ಸೋಲಿಗೆ ಅನೇಕ ಕಾರಣಗಳಿವೆ ಎಂದರು

LEAVE A REPLY

Please enter your comment!
Please enter your name here

error: Content is protected !!