ಕಲಬುರಗಿ ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.
ಇಂದು ಕಲಬುರಗಿ ನಗರದ ಶರಣ ಬಸವೇಶ್ವರ ದೇವಾಲಯದ ಆವರಣದಲ್ಲಿ ನೀಟ್ ಪರೀಕ್ಷೆ ಹಾಗೂ ಜೀ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಶರಣಬಸವೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ನೀಟ್ ಪರೀಕ್ಷೆಯಲ್ಲಿ ಕಲ್ಯಾಣ ಕರ್ನಾಟಕ್ಕೆ ಪ್ರಥಮ ರ್ಯಾಂಕ್ ಪಡೆದ ವಿನಯ್ ಕುಮಾರ್ ಹಾಗೂ ದ್ವಿತೀಯ ರ್ಯಾಂಕ್ ಪಡೆದ ಪಂಚಾಕ್ಷರಿ ಹಾಗೂ ಜೀ ಪರೀಕ್ಷೆಯಲ್ಲಿ ಶರಣರಾಜ್ ಪಿಯು ಬೋರ್ಡ್ ಟಾಪರ್ಸ್ ಆದ ಸಮರ್ಥ ಹಾಗೂ ಕುಮಾರಿ ಬನಶಂಕರಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.





