ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳ ಪುನಶ್ಚೇತನ – ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ
Description: ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಮಂಡ್ಯದಲ್ಲಿ ಜನತಾ ದರ್ಶನದ ಬಳಿಕ ಅವರು, HMT ಕಾರ್ಖಾನೆ, ಭದ್ರಾವತಿ VISL ಕಾರ್ಖಾನೆ ಹಾಗೂ ಆಂಧ್ರ ಪ್ರದೇಶದ RINL ಸ್ಟೀಲ್ ಘಟಕ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಗೆ ಉತ್ತೇಜನ ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.
ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲು ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿಲಾಗಿದೆ. 1918ರಿಂದ ಆರಂಭವಾದ ಹಲವು ಕೈಗಾರಿಕೆಗಳು ಸ್ಥಗಿತಗೊಂಡಿವೆ. ಇವುಗಳ ಪುನಶ್ಚೇತನ ಹಾಗೂ ಉದ್ಯೋಗ ಸೃಷ್ಟಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.





