ಕಲಬುರಗಿ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಆಳಂದ ಪೊಲೀಸ್ ಠಾಣೆಯಲ್ಲಿ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ದೂರು ಶ್ರೀನಿವಾಸಲು ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಗಡದ ಸಮುದಾಯದ ಅಭಿವೃದ್ಧಿ ಹಾಗೂ ಕಾನೂನಾತ್ಮಕ ಹಕ್ಕುಗಳ ರಕ್ಷಣೆ ಹಿತದೃಷ್ಟಿಯಿಂದ ಸಭೆ ನಡೆಯಲಿವೆ.





