ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಡಾ. ಮಹಾಂತ ಶಿವಯೋಗಿಗಳ ತತ್ವಾದರ್ಶಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಲು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹೇಳಿದರು.
ಜಿಲ್ಲಾಡಳಿತ, ಜಿಪಂಯಿಂದ ನಗರದ ಡಿಎಸಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಹಿನ್ನೆಲೆ ನಡೆದ ವ್ಯಸನಮುಕ್ತ ದಿನ ಉದ್ಘಾಟಿಸಿ ಮಾತಾಡಿ, ಸಾರ್ವಜನಿಕರು ಹಾಗೂ ಯುವ ಜನತೆ ವ್ಯಸನಗಳಿಂದ ಮುಕ್ತರಾಗಲು ಈ ದಿನಾಚರಣೆ ಪ್ರೇರಣೆಯಾಗಲಿ ಎಂದರು





