ಮುಖ್ಯಮಂತ್ರಿ ಸಿದ್ದರಾಮಯ್ಯನ ವಿರುದ್ಧ ಆಧಾರ ರಹಿತ ಆರೋಪಗಳಿಗೆ ರಾಜ್ಯಪಾಲರು ಪರೀಶಿಲನೆ ಮಾಡದೇ ನೀಡಿರುವ ನೋಟಿಸ್ ಸರಿಯಾದ ಕ್ರಮವಲ್ಲ ಎಂದು ಅಹಿಂದ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಧರಣಿ ಸತ್ಯಾಗ್ರಹದಲ್ಲಿ ಅನೇಕ ಮುಖಂಡರು ರಾಜ್ಯಪಾಲರು ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ವಿರುದ್ಧ ಹರಿಹಾಯ್ದರು, ಸಿಎಂಗೆ ನೀಡಿದ ನೋಟಿಸ್ ನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು