Google search engine
ಮನೆUncategorizedಕುಂಬಾರ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಸಮಾಜದ ಅಧ್ಯಕ್ಷ ಶಿವಶರಣಪ್ಪಾ...

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಸಮಾಜದ ಅಧ್ಯಕ್ಷ ಶಿವಶರಣಪ್ಪಾ ಕುಂಬಾರ ಒತ್ತಾಯಿಸಿದ್ದಾರೆ

 

ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಸಮಾಜದ ಅಧ್ಯಕ್ಷ ಶಿವಶರಣಪ್ಪಾ ಕುಂಬಾರ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಮಾರ್ಚ್ 2023 ರಲ್ಲಿಯೇ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದು, ಆದರೆ ಇಲ್ಲಿಯವರೆಗೂ ನಿಗಮದ ಅಧ್ಯಕ್ಷರನ್ನಾಗಲಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡುವುದಾಗಲಿ ಇಲ್ಲಿಯವರೆಗೂ ಆಗಿಲ್ಲ. ಕರ್ನಾಟಕದಲ್ಲಿ ಕುಂಬಾರರು ಹಿಂದುಳಿದ ಸಮುದಾಯಕ್ಕೆ ಸೇರಿದವರೆಂದು ಮಾತ್ರ ಹಣೆಪಟ್ಟಿ ಇದೆ. ಆದರೆ ಸರ್ಕಾರದವರು ಹಿಂದುಳಿದ ವರ್ಗದವರಿಗೆ ನೀಡುವ ಸೌಲಭ್ಯಗಳಿಂದ ನಾವು ವಂಚಿತರಾಗುತ್ತಿದ್ದೇವೆ. ಹೀಗಾಗಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದಿದ್ದು ಸರ್ಕಾರ ಆದಷ್ಟು ಬೇಗ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ ಸೂಕ್ತ ಅನುದಾನ ಮಂಜೂರು ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!