ಕರ್ನಾಟಕದ ಮುಖ್ಯಮಂತ್ರಿಗಳಾದ ಸಿಧ್ದರಾಮಯ್ಯನವರ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ಆದೇಶ ಮಾಡಿರುವುದರ ವಿರುದ್ಧ ಕೈ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯಪಾಲರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ನಡೆದಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಗರಣ ನಡೆದಿದೆ ಎನ್ನುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮವನ್ನು ಖಂಡಿಸಿ ಇಂದು ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ರಾಜ್ಯಪಾಲರ ವಿರುಧ್ದ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಷ ಹೊರಹಾಕಿದ್ರು, ನಂತರ ಮಾತನಾಡಿದ ಸಿಎಂ ರಾಜಕೀಯ ಸಲಹೆಗಾರ ಬಿ. ಆರ್ ಪಾಟೀಲ್ ರಾಜ್ಯಪಾಲರು ಅನುಮತಿ ಕೊಟ್ಟಿರೋದು ನಮಗೇನು ಅನಿರೀಕ್ಷಿತ ಅಲ್ಲ, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಾಸಿಕ್ಯೂಷನ್’ಗೆ ಅನುಮತಿ ಕೊಡ್ತಾರೆ ಅಂತ ಗೊತ್ತಿತ್ತು, ಇದಕ್ಕೆ ನಾವು ಹೆದುರುವುದಿಲ್ಲ ಸಿದ್ದರಾಮಯ್ಯನವರು ಯಾರೇ ಬಂದರೂ ರಾಜಿನಾಮೆ ಕೊಡುವುದಿಲ್ಲ ಎಂದು ಹೇಳಿದರು.





