ಸುಪ್ರೀಂ ಕೋರ್ಟ್ ಸಂವಿಧಾನ ಪೀಠವು ಪರಿಶಿಷ್ಟ ಜಾತಿ, ಸಾಮಾಜಿಕವಾಗಿ ಆರ್ಥಿಕವಾಗಿ, ಅತೀ ಹಿಂದುಳಿದ ಉಪ ಜಾತಿಗಳಿಗೆ ಒಳಮೀಸಲಾತಿ ನೀಡುವ ಸಂವಿಧಾನಿಕ ಅಧಿಕಾರ ಆಯಾ ರಾಜ್ಯಗಳಿಗೆ ನೀಡಿರುವುದನ್ನು ಶೀಘ್ರವಾಗಿ ಅನುಷ್ಟಾನಗೊಳಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿ ಜನಾಂದೋಲನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಚಂದ್ರಕಾಂತ ನಾಟಿಕಾರ್ ತಿಳಿಸಿದ್ದಾರೆ.
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಭಾರತದ ಸರ್ವೋಚ್ಛ ನ್ಯಾಯಾಲಯದ 7 ಜನ ನ್ಯಾಯಾಧೀಶರ ನ್ಯಾಯಮೂರ್ತಿಗಳ ಪೀಠವು ಒಳಮೀಸಲಾತಿ ವರ್ಗೀಕರಣ ಅನುಷ್ಟಾನಗೊಳಿಸಲು ಜನಸಂಖ್ಯೆ ಆಧಾರದ ಮೇಲೆ ಪರಿಶಿಷ್ಟ ಜಾತಿ ಆಯಾ ರಾಜ್ಯಗಳಿಗೆ ಒಳ ಮೀಸಲಾತಿ ಬಗ್ಗೆ ಸುಪ್ರೀ ಕೋರ್ಟ್ ನೀಡಿರುವ ಆದೇಶದಂತೆ ರಾಜ್ಯ ಸರ್ಕಾರ ಶೀಘ್ರವೇ ಒಳಮೀಸಲಾತಿ ವರ್ಗೀಕರಣವನ್ನು ಸುಪ್ರೀಂ ಕೋರ್ಟ್ ಸಂವಿಧಾನಿಕ ಪೀಠವು ಪರಿಶಿಷ್ಟ ಜಾತಿ ಸಾಮಾಜಿಕವಾಗಿ, ಆರ್ಥಿಕವಾಗಿ, ಅತೀ ಹಿಂದುಳಿದ ಉಪಜಾತಿಗಳಿಗೆ ಒಳಮೀಸಲಾತಿ ನೀಡುವ ಸಂವಿಧಾನಿಕ ಅಧಿಕಾರ ಆಯಾ ರಾಜ್ಯಗಳಿಗೆ ನೀಡಿರುತ್ತದೆ. ಅದನ್ನು ಆದಷ್ಟು ಬೇಗ ಅನುಷ್ಟಾನಗೊಳಿಸಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ವತಿಯಿಂದ ಬರುವ 30 ನೇ ತಾರೀಖಿನಂದು ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಿಂದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.





