ರಾಜ್ಯದಲ್ಲಿ ಮೂಡಾ ಹರಗಣ ಸದ್ದು ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆ ಎದುರಿಸಬೇಕು. ಅದು ಬಿಟ್ಟು ಕಾಂಗ್ರೆಸಿನವರು ವಿನಾಕಾರಣ ರಾಜ್ಯಪಾಲರ ಮೇಲೆ ಅಪವಾದ ಹೊರಿಸುವುದು ಸರಿಯಲ್ಲ ಎಂದು ಮಡಿಕೇರಿ ವಿಧಾನಸಭಾ ಮಾಜಿ ಶಾಸಕ ಅಪ್ಪಚ್ಚುರಂಜನ್ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಹಗರಣದಿಂದ ಸರಕಾರಕ್ಕೆ ಸಾವಿರಾರು ಕೋಟಿ ನಷ್ಟ ಉಂಟಾಗಿದೆ ಎಂದರು