ಜಿಲ್ಲೆಯಾದ್ಯಂತ ವಾಡಿಕೆ ಗಿಂತ ಶೇಕಡ 95 ರಷ್ಟು ಹೆಚ್ಚು ಮಳೆ ಈ ಬಾರಿ ಆಗಿದ್ದು 592 ಮಿ. ಮೀ ನಷ್ಟು ದಾಖಲಾಗಿದೆ. ಬಹುತೇಕ ಜಿಲ್ಲೆಯ ಕೆರೆಗಳು ತುಂಬಿದ್ದು, ಇಲ್ಲಿಯವರೆಗೆ ಯಾವುದೇ ಕೆರೆಯು ಹೊಡೆದಿಲ್ಲ ಮತ್ತು ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಧ್ಯಮಕ್ಕೆ ಜಿಲ್ಲೆಯಲ್ಲಿ ಬಿದ್ದಿರುವ ಮಳೆಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಇದ್ದರು.