ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ, ಸಮನ್ವಯದಿಂದ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದೆಂದು ಜಿ ಪಂ ಸಿಇಒ ಎಸ್. ಜೆ. ಸೋಮಶೇಖರ್ ಹೇಳಿದರು. ಬಾಲ್ಯ ವಿವಾಹ ಹಾಗೂ ಗರ್ಭಾವಸ್ಥೆ ತಡೆಗಟ್ಟುವ ಬಗ್ಗೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತಾಡಿದರು. ಗ್ರಾ ಪಂ ಮಟ್ಟದಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸದಸ್ಯರು, ಜನಪ್ರತಿನಿಧಿಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಕಾರದಲ್ಲಿ ಬಾಲ್ಯವಿವಾಹ ಕುರಿತು ಮನವರಿಕೆ ಮಾಡಲಾಗುವುದು ಎಂದರು.
ಬಾಲ್ಯ ವಿವಾಹ ತಡೆಗಟ್ಟಲು ಕ್ರಮ ವಹಿಸಲಾಗುವುದು
RELATED ARTICLES
Recent Comments
ಮೇಲೆ Hello world!





