ಮಳೆ ಬೆಳೆ ಚನ್ನಾಗಿ ಆಗಲಿ ಎಂದು ಗೋವುಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಗದಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಗಜಾನನ ಸಮಿತಿ ಪ್ರತಿಯಿಂದ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಎಪಿಎಂಸಿ ಮಾರುಕಟ್ಟೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುತ್ತಾರೆ, ಹೀಗಾಗಿ ರೈತರು ಸಮೃದ್ಧವಾಗಿ ಇರಬೇಕು ಹಾಗೂ ಲೋಕಕಲ್ಯಾಣಾರ್ಥವಾಗಿ ಗೋವುಗಳ ಪೂಜೆ ಮಾಡಲಾಗಿದೆ. ಪೂಜೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಭಾಗಿಯಾಗಿದ್ದರು