ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡ ಬಡಾವಣೆಯಲ್ಲಿ ಮಂಗಳವಾರ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್. ಎ. ಎಫ್) ಹಾಗೂ ಸ್ಥಳೀಯ ಪೊಲೀಸರು ಪಥ ಸಂಚಲನ ನಡೆಸಿದರು. ಗಣೇಶಮೂರ್ತಿಗಳ ವಿಸರ್ಜನಾ ಪೂರ್ವ ಮೆರವಣಿಗೆ ಹಾಗಇ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಪಥ ಸಂಚಲನ ನಡೆಸಲಾಗಿದೆ. ಪಥ ಸಂಚಲನದ ವೇಳೆ ಆರ್. ಎ. ಎಫ್ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ