ನಗರದ ಉರ್ದು ಶಾಲೆಯ ಅಕ್ಕಪಕ್ಕ ಹಾಗೂ ಮುಂಭಾಗದಲ್ಲಿ ಸ್ವಚ್ಛತೆ ಮರಿಚಿಕೆಯಾಗಿದ್ದು ಕಸದ ಕೂಪವಾಗಿ ಮಾರ್ಪಟ್ಟಿದೆ ಎಂದು ಕೆಆರ್ ಪಕ್ಷದ ತಾಲೂಕು ಅಧ್ಯಕ್ಷ ಭೋಜರಾಜ್ ಹೇಳಿದರು. ರಾತ್ರಿ ಆಗುತ್ತಿದ್ದಂತೆ ಇಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು ಕುಡುಕರು ಸಹ ಇಲ್ಲಿ ಕುಡಿದು ಬಾಟಲಿಗಳನ್ನ ಬಿಟ್ಟು ಹೋಗುತ್ತಿದ್ದಾರೆ. ಇದರಿಂದಾಗಿ ಇಲ್ಲಿ ಕಾಂಪೌಂಡ್ ನಿರ್ಮಿಸಿ ಹೆಚ್ಚಿನ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.