ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿರುವ ಕಾರಣಕ್ಕೆ ಮುಂದಿನ ಐದು ವರ್ಷಕ್ಕೆ ನಾನೇ ಅಧ್ಯಕ್ಷನಾಗಿ ಮುಂದುವರಿಯಲಿದ್ದೇನೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯ ಅರ್ಜಿ ಸಲ್ಲಿಕೆಯ ಅವಧಿ ಕೊನೆಯಾಗಿದೆ. ನನ್ನ ನಾಮಪತ್ರ ಹೊರತುಪಡಿಸಿ ಬೇರೆ ಯಾವ ನಾಮಪತ್ರವೂ ಸಲ್ಲಿಕೆಯಾಗಿಲ್ಲ. ನನ್ನ ಅಧ್ಯಕ್ಷ ಸ್ಥಾನ ಭದ್ರವಾಗಿದೆ ಎಂದು ಮಾಧ್ಯಮದವರಿಗೆ ತಿಳಿಸಿದರು.