ವಾಲ್ಮೀಕಿ ಹಗರದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಪಾತ್ರ ಇದೆ ಎಂದು ಇ. ಡಿ. ಯವರು ಹೇಳುತ್ತಿದ್ದಾರೆ. ಬೇಕಾದಷ್ಟು ಸಲ ಹಾಗೇ ಆಗುತ್ತದೆ. ಅವರು ಹೇಳಿರುವುದಕ್ಕೆ ನಮಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ನಾವು ಹೇಳಿರುವುದಕ್ಕೆ ಅವರಿಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ಬೇಕಾದಷ್ಟು ಸಲ ಹೀಗಾಗಿದೆ. ವಿವಿಧ ತನಿಖಾ ಸಂಸ್ಥೆಗಳ ತನಿಖಾ ವಿಧಾನವೇ ಬೇರೆ ಇರುತ್ತದೆ. ಆ ದೃಷ್ಟಿಯಿಂದ ಮಾಡುತ್ತಾರೆ. ಇ. ಡಿ. ಯವರು ಮತ್ತು ಎಸ್ಐಟಿಯವರು ಇಬ್ಬರು ಚಾರ್ಜ್ ಶೀಟ್ ಸಲ್ಲಿಸುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.





