ಶುಕ್ರವಾರ, ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಮಳೆಯಿಂದಾಗಿ ಹಳ್ಳ ತುಂಬಿ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶುಕ್ರವಾರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು. ಸಂತ್ರಸ್ತರಿಗೆ ಊಟೋಪಚಾರ, ರಾತ್ರಿ ಮಲಗಲು ಹೊದಿಕೆ ಸೇರಿದಂತೆ ಸಕಲ ಮೂಲಸೌಕರ್ಯ ಒದಗಿಸಬೇಕು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದರು





