ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ಹಿರಿಯ ನಾಗರಿಕ ವೇದಿಕೆಗಳ ಹಾಗೂ ಲಯನ್ಸ್ ಕುಮಾರ ಪಾರ್ಕ್ ಟ್ರಸ್ಟ್ , ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಬೆಂಗಳೂರು ನಗರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಬಾಲಕರ ಬಾಲ ಮಂದಿರದ ಆವರಣ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೂಸೂರು ರಸ್ತೆ, ಬೆಂಗಳೂರು ಇಲ್ಲಿ ಆಯೋಜಿಸಲಾಗಿದ್ದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025ರ ಪ್ರಯುಕ್ತ “ ಉಚಿತ ನೇತ್ರ ತಪಾಸಣಾ ಶಿಬಿರ ವನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕರಾದ ಡಾ. ರಾಘವೇಂದ್ರ ಟಿ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಚಲನಚಿತ್ರದ ಕಲಾವಿದರಾದ ಶ್ರೀಮತಿ ಗಿರಿಜಾ ಲೋಕೇಶ್ , ಬೆಂಗಳೂರು ನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸುಮಂಗಲ ಮಾಳಪುರ, ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳಾದ ಕೃಷ್ಣಮೂರ್ತಿ ಕೆ ಹಾಗೂ ವಿವಿಧ ಸಂಘ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಸರ್ಕಾರಿ ಬಾಲಕರ ಬಾಲ ಮಂದಿರ ಸುಧಾರಣಾ ಸಂಸ್ಥೆಗಳ ಸಂಕೀರ್ಣ
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಸರ್ಕಾರಿ ಬಾಲಕರ ಬಾಲ ಮಂದಿರ ಸುಧಾರಣಾ ಸಂಸ್ಥೆಗಳ ಸಂಕೀರ್ಣ





