ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ- ಹಳ್ಳಿ ಜನರ ಸಂಕಷ್ಟ ಆಲಿಸಿದ ಶಾಸಕ ನಿರಂತರ ಮಳೆಯಿಂದಾಗಿ ಬೆಳೆ ಹಾನಿ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಬುರಗಿ ದಕ್ಷಿಣ ಶಾಸಕರು ನಂದಿಕೂರ, ಪಾಣೆಗಾಂವ್, ಕಾಡನಾಳ್, ಸಿರನೂರ್ ಗ್ರಾಮಗಳಿಗೆ ಭೇಟಿ ನೀಡಿ, ತಹಶೀಲ್ದಾರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಪ್ರದೇಶಗಳಲ್ಲಿ ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ