Google search engine
ಮನೆUncategorizedಯಾದಗಿರಿಯಲ್ಲಿ ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ

ಯಾದಗಿರಿಯಲ್ಲಿ ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ

ಯಾದಗಿರಿಯಲ್ಲಿ ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ

ಯಾದಗಿರಿಯಲ್ಲಿ ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ. ಯಾದಗಿರಿ :- ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ಕೇಂದ್ರ ಬಸ್ ನಿಲ್ದಾಣ ದ ಮೂಲಕ ಅಭಿಯಾನಕ್ಕೆ ಚಾಲನೆ ಶಾಸ್ತ್ರಿ ವೃತ್ತ, ಅಂಬೇಡ್ಕರ್ ವೃತ್ತ,ಮಹಾತ್ಮ ಗಾಂಧಿ ವೃತ್ತದ ವರೆಗೆ ಪಾದಯಾತ್ರೆ ಮಾಡಿ ಅಭಿಯಾನದ ಕುರಿತು ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಜೋಗನಹಳ್ಳಿ ಗುರುಮೂರ್ತಿ ಅವರು ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ,ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ.ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ರಾಜ್ಯದ ಮತದಾರರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ, ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಹಾಗಾಗಿ ನಮ್ಮ ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಒಂದು ದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಅವರು ಮಾತನಾಡಿ ರಾಜ್ಯದಲ್ಲಿ ರೈತರಿಗೆ,ಮಹಿಳೆಯರಿಗೆ,ವಿದ್ಯಾರ್ಥಿಗಳಿಗೆ,ಕೃಷಿ ಕಾರ್ಮಿಕರಿಗೆ ಉತ್ತಮವಾದ ಜೀವನ ನಿರ್ವಹಣೆಗೆ ಅನುನಕೂಲದ ವಾತಾವರಣ ನಿರ್ಮಾಣವಾಗಿದೆ ಈ ಎಲ್ಲಾ ಅವ್ಯವಸ್ಥೆಗಳನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮವಾದ ಜನ ಜೀವನ ಮಾಡುವಂತೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದು ಇದಕ್ಕೆ ಕನ್ನಡಪರ,ರೈತಪರ,ಪ್ರಗತಿಪರ ಸಂಘಟನೆಗಳ ಮುಖಂಡರು,ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!