ಅಸಂಘಟಿತ ವಲಯದ ಕಾರ್ಮಿಕರಿಗೆ ಇಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದರು. ಯಾದಗಿರಿ ನಗರದ ಪಾಟೀಲ್ ಸಭಾಂಗಣದಲ್ಲಿ ಯಾದಗಿರಿ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಸಚಿವ ಸಂತೋಷ ಲಾಡ್ ಅವರು ಉದ್ಘಾಟನೆ ಮಾಡಿದರು. ಈ ವೇಳೆ ಯಾದಗಿರಿ ಜಿಲ್ಲಾಉಸ್ತುವಾರಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ, ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರು, ಶರಣಗೌಡ ಕಂದಕೂರು,ರಾಜಾವೇಣುಗೋಪಾಲನಾಯಕ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಇದ್ದರು
Home Uncategorized ಅಸಂಘಟಿತ ವಲಯದ ಕಾರ್ಮಿಕರಿಗೆ ಇಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದರು