ಸಾರಿಗೆ ನಿಯಮ ಉಲ್ಲಂಘನೆ ಮಾಡಿ ನಾಮಫಲಕ ಹಾಕಿಕೊಂಡು ಓಡಾಡುತ್ತಿದ್ದ ವಾಹನಗಳಿಗೆ ಆರ್ ಟಿಓ ಅಧಿಕಾರಿಗಳು ದಾಳಿ ಮಾಡಿ ದಂಡ ಹಾಕಿ ಬಿಸಿಮುಟ್ಟಿಸಿದ್ದಾರೆ.ಯಾದಗಿರಿ ನಗರದಲ್ಲಿ ಓಡಾಡುತ್ತಿದ್ದ ವಾಹನಗಳಿಗೆ ಬಿಸಿ ಮುಟ್ಟಿಸಿದ್ದಾರೆ.ಧಾರವಾಡ ಪ್ರಾದೇಶಿಕ ಸಾರಿಗೆ ಆಯುಕ್ತರಾದ ಕೆ.ಟಿ.ಹಾಲಸ್ವಾಮಿ ಅವರ ನೇತೃತ್ವದಲ್ಲಿ ವಾಹನಗಳ ತಪಾಸಣೆ ಮಾಡಲಾಯಿತು. ಯಾದಗಿರಿಯ ಯುಡಾ ಅಧ್ಯಕ್ಷ ಬಾಬುರಾವ್ ಕಾಡ್ಲೂರು ಅವರ ವಾಹನಕ್ಕೆ ನಾಮಫಲಕ ಹಾಕಿದಕ್ಕೆ ಆರ್ ಟಿಓ ಅಧಿಕಾರಿಗಳು ಎಚ್ಚರಿಕೆ ನೀಡಿ ದಂಡ ಹಾಕಿದರು.ಸಾರಿಗೆ ನಿಯಮ ಪಾಲಿಸಬೇಕೆಂದು ಸೂಚನೆ ನೀಡಿದ್ದಾರೆ. ಅದೆ ರೀತಿ ನಂಬರ್ ಪ್ಲೆಟ್ ಅಳವಡಿಕೆ ಮಾಡದೇ ಓಡಾಡುತ್ತಿದ್ದ ವಾಹನಗಳಿಗೆ ಎಚ್ಚರಿಕೆ ನೀಡಿದರು. ಸಾರಿಗೆ ನಿಯಮ ಪಾಲಿಸಿ ವಾಹನಗಳ ತೆರಿಗೆ ನಿಯಮಿತವಾಗಿ ಪಾವತಿ ಮಾಡಬೇಕೆಂದು ಸೂಚಿಸಿದ್ದಾರೆ
ಸಾರಿಗೆ ನಿಯಮ ಉಲ್ಲಂಘನೆ ಮಾಡಿ ನಾಮಫಲಕ ಹಾಕಿಕೊಂಡು ಓಡಾಡುತ್ತಿದ್ದ ವಾಹನಗಳಿಗೆ ಆರ್ ಟಿಓ ಅಧಿಕಾರಿಗಳು ದಾಳಿ
ಸಾರಿಗೆ ನಿಯಮ ಉಲ್ಲಂಘನೆ ಮಾಡಿ ನಾಮಫಲಕ ಹಾಕಿಕೊಂಡು ಓಡಾಡುತ್ತಿದ್ದ ವಾಹನಗಳಿಗೆ ಆರ್ ಟಿಓ ಅಧಿಕಾರಿಗಳು ದಾಳಿ





