ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಯಾದಗಿರಿಯಲ್ಲಿ ಬೃಹತ್ ಹೋರಾಟ ಮಾಡಲಾಗಿದೆ.ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕಾರಿ ಮಾತನಾಡಿದ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಯಾದಗಿರಿ ಜಿಲ್ಲೆಯ ಶಹಾಪುರನ ಬಸವೇಶ್ವರ ವೃತ್ತದಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಗೌಡಪ್ಪಗೌಡ ಆಲ್ದಾಳ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ಮಾಡಲಾಯಿತು. ಕೂಡಲೇ ರಮೇಶ್ ಕತ್ತಿಯನ್ನು ಬಂಧನ ಮಾಡುವಂತೆ ಪ್ರತಿಭಟನೆ ನಿರತರು ಒತ್ತಾಯ ಮಾಡಿದ್ದಾರೆ. ಒಂದು ಕಡೆ ಪ್ರತಿಭಟನೆ ಮಾಡಿದರೆ ಮತ್ತೊಂದೆಡೆ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಯಾದಗಿರಿ ಜಿಲ್ಲೆಯ ಶೋರಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಕೂಡಲೇ ರಮೇಶ್ ಕತ್ತಿಯನ್ನು ಬಂಧನ ಮಾಡಬೇಕು. ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವದಾಗಿ ವಾಲ್ಮೀಕಿ ಸಮಾಜದ ಉತ್ತರ ಕರ್ನಾಟಕ ಭಾಗದ ಅಧ್ಯಕ್ಷ ಮರೇಪ್ಪ ನಾಯಕ ಅವರು ಎಚ್ಚರಿಕೆ ನೀಡಿದ್ದಾರೆ