ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಅಮಿತ್ ಶಾ
ದೆಹಲಿಯ ಕೆಂಪು ಕೋಟೆ ಬಳಿ ಸಂಜೆ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ ಕೆಲವರು ಗಾಯಗೊಂಡಿದ್ದು, ವಾಹನಗಳು ಹಾನಿಗೊಳಗಾಗಿವೆ. ಈ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು, ಎನ್ಎಸ್ಜಿ, ಎನ್ಐಎ ತಂಡಗಳು ಭೇಟಿ ನೀಡಿ ತನಿಖೆ ಆರಂಭಿಸಿವೆ. ಅಮಿತ್ ಶಾ ಅವರು ಲೋಕನಾಯಕ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ದ ೀಶಾದ್ಯಂತ ಹೈ ಆಲರ್ಟ್ ಘೋಷಿಸಲಾಗಿದೆ





