ಇಂದು ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಮಾಲೋಚನಾ ಸಮಿತಿ ಸಭೆಯನ್ನು ಬೆಂಗಳೂರು ನಗರ ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಸತೀಶ್.ಕೆ ಅವರು ಅಧ್ಯಕ್ಷತೆ ವಹಿಸಿದರು. ಇದೇ ಸಂದರ್ಭದಲ್ಲಿ ಆರ್.ಬಿ.ಐ ನ ಎಲ್.ಡಿ.ಓ ಇಲ ಸಾಹು, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳಾದ ಯೋಶಧ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಮೋಹನ್ ಕುಮಾರ್, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನರ್ಬಾಡ್) ಜಿಲ್ಲಾ ಅಭಿವೃದ್ಧಿ ಅಧಿಕಾರಿಗಳಾದ ಅಮಲ ಎಸ್ ಮಹೇಶ್ವರಿ,ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಬ್ಯಾಂಕುಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು