ಕುತೂಹಲ ಕೆರಳಿಸಿದ ಸಿಎಂ, ಮಲ್ಲಿಕಾರ್ಜುನ ಖರ್ಗೆ ಭೇಟಿ ರಾಜ್ಯ ರಾಜಕೀಯದಲ್ಲಿನ ಕುರ್ಚಿ ಕಿತ್ತಾಟದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ ಅರಮನೆ ಮೈದಾನದಲ್ಲಿ ನಡೆದ ಸಚಿವ ಡಿ. ಸುಧಾಕರ್ ಅವರ ಪುತ್ರನ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ, ಸಿದ್ದರಾಮಯ್ಯ ನೇರವಾಗಿ ಖರ್ಗೆ ಅವರ ಸದಾಶಿವನಗರದ ನಿವಾಸಕ್ಕೆ ತೆರಳಿದರು. ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಖರ್ಗೆ ನಿವಾಸದ ಬಳಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿತ್ತು ಮತ್ತು ರಸ್ತೆಯು ಬ್ಯಾರಿಕೇಡ್ ಅಳವಡಿಸಿ ಬಂದ್ ಮಾಡಲಾಗಿತ್ತು