ಬೆಂಗಳೂರು: ಕುರ್ಚಿ ಕದನ, ರಾತ್ರೋರಾತ್ರಿ ದೌಡಾಯಿಸಿದ ವೇಣುಗೋಪಾಲ್ ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಬಣಗಳ ನಡುವೆ ಜಟಾಪಟಿ ಮುಂದುವರಿದಿದೆ ಈ ನಡುವೆ, ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಕೊಚ್ಚಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ ಅವರು ಯಾವುದೇ ರಾಜಕೀಯ ನಾಯಕರನ್ನು ಭೇಟಿಯಾಗದೆ, ಮಾಧ್ಯಮಗಳೊಂದಿಗೆ ಮಾತನಾಡದೆ ನೇರವಾಗಿ ಹೋಟೆಲ್ಗೆ ತೆರಳಿದ್ದು, ಇದು ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ